ದೆಹಲಿ: ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಬುಡಕಟ್ಟು ಆಯೋಗ ಆಯೋಜಿಸಿರುವ ಸಂವಾದ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ ಸದಸ್ಯ ಶಾಂತಾರಾಮ ಸಿದ್ದಿ ಭಾಗಿಯಾದರು.
3 ದಿನಗಳ ಕಾಲ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ಬುಡಕಟ್ಟು ಜನರ ಸರ್ವತೋಮುಖ ಅಭಿವೃದ್ಧಿಯ ಬಗ್ಗೆ ವಿವಿಧ ಕ್ಷೇತ್ರದ ತಜ್ಞರಿಂದ ಸಲಹೆ ಸೂಚನೆಗಳನ್ನು ಪಡೆದರು.
ಈ ಸಂದರ್ಭದಲ್ಲಿ ಕೇಂದ್ರ ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಮಾನ್ಯ ಭೂಪೆಂದರ ಯಾದವ, ಕೇಂದ್ರ ಸಚಿವ ಫಾಗನ ಸಿಂಗ್ ಜಿ, ಬುಡಕಟ್ಟು ಆಯೋಗದ ಅಧ್ಯಕ್ಷ ಹರ್ಷ ಚವ್ಹಾಣ, ಬುಡಕಟ್ಟು ಆಯೋಗದ ಕಾರ್ಯದರ್ಶಿ ಅಲ್ಕಾ ತಿವಾರಿ, ಆಯೋಗದ ಸದಸ್ಯ ಅನಂತ ನಾಯಕ, ಕರ್ನಾಟಕದ ಡಾ.ಬಾಲಸುಬ್ರಹ್ಮಣ್ಯರವರು, ಇನ್ನಿತರ ಪದಾಧಿಕಾರಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.