ಯಲ್ಲಾಪುರ : ಕಲಾ ಕದಂಬ ಆರ್ಟ್ ಸೆಂಟರ್ ಸಂಸ್ಥೆಯು 11 ವರ್ಷಗಳಿಂದ ಯಕ್ಷಲೋಕದ ಹಿಮ್ಮೇಳ ಕಲಾವಿದರಿರೆ ನೀಡುವ ಕಾಳಿಂಗ ನಾವಡ ಪ್ರಶಸ್ತಿಗೆ ಮದ್ದಳೆ ಕಲಾವಿದ, ಯಲ್ಲಾಪುರದ ಶಂಕರ ಭಾಗವತ ಆಯ್ಕೆಯಾಗಿದ್ದಾರೆ.
ಅಂಬರೀಷ್ ಭಟ್, ದೇವರಾಜ ಕರಬ, ವಿಶ್ವನಾಥ ಉರಾಳ, ಮಮತಾ ಆರ್. ಕೆ. , ಮುರಳೀಧರ ನಾವಡ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ರೂ. 10 ಸಾವಿರ ನಗದು ಹಾಗೂ ಬೆಳ್ಳಿತಟ್ಟೆ ಒಳಗೊಂಡಿದೆ.