ಕಾರವಾರ: ಕೆನರಾ ಬ್ಯಾಂಕ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಕುಮಟಾದ ವತಿಯಿಂದ ಮಾ 24 ರಿಂದ ಏಪ್ರಿಲ್ 2 ರವರೆಗೆ 10 ದಿನಗಳ ಜೇನು ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷಗಳು. ಹಾಗೂ ಕನಿಷ್ಟ ವಿದ್ಯಾರ್ಹತೆ ಕನ್ನಡ ಓದಲು ಬರೆಯಲು ಬರಬೇಕು ಮತ್ತು ಸ್ವಯಂ ಉದ್ಯೋಗ ಮಾಡಲು ಆಸ್ತಕಿ ಹೊಂದಿರಬೇಕು.
ಆಸಕ್ತರು ತರಬೇತಿಗೆ ಬರುವಾಗ 4 ಪಾಸ್ಪೋರ್ಟ ಸೈಜ್ ಫೋಟೋ, ರೇಶನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಇವುಗಳ 1ಝೆರಾಕ್ಸ್ ಪ್ರತಿಯನ್ನು ತರಬೇಕು. ಈ ತರಬೇತಿಯ ಸದುಪಯೋಗವನ್ನು ಪಡೆದುಕೊಂಡು ಉದ್ಯೋಗ ಕೈಗೊಳ್ಳಬಹುದಾಗಿದೆ.
ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ, ಕುಮಟಾ -581343 ಉತ್ತರ ಕನ್ನಡ ಜಿಲ್ಲೆ ಇವರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಲ್ಲದೇ ದೂರವಾಣಿ ಸಂಖ್ಯೆ:Tel:+919449860007, Tel:+919538281989, Tel:+919916783825, Tel:+918880444612,Tel:+919620962004, ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ ಎಂದು ಸಂಪರ್ಕಿಸುವಂತೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೇನು ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
