Slide
Slide
Slide
previous arrow
next arrow

ಶ್ರೀ ಉಮಾಮಧುಕೇಶ್ವರ ದೇವರ ಜಾತ್ರಾ ಮಹೋತ್ಸವ ಸಂಪನ್ನ

300x250 AD

ವಿವಿಧ ಧಾರ್ಮಿಕ ಕಾರ್ಯಕ್ರಮ: ಪೂಜೆ ಸಲ್ಲಿಸಿ ಪುನೀತರಾದ ಸಾವಿರಾರು ಭಕ್ತರು

ಬನವಾಸಿ: ಇಲ್ಲಿಯ ಐತಿಹಾಸಿಕ ಮಾತೋಬಾರ ಶ್ರೀ ಮಧುಕೇಶ್ವರ ದೇವಸ್ಥಾನದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ ಶ್ರೀ ಉಮಾಮಧುಕೇಶ್ವರ ದೇವರ ಜಾತ್ರಾ ಮಹೋತ್ಸವ ಹಾಗೂ ವಾರ್ಷಿಕ ಮಹಾರಥೋತ್ಸವು ಸಂಭ್ರಮದಿಂದ ನಡೆಯಿತು.

ಮಂಗಳವಾರ ಮುಂಜಾನೆ ಶ್ರೀ ಮಧುಕೇಶ್ವರ ದೇವರಿಗೆ ವಿಷೇಶ ಪೂಜೆ ನೆರವೇರಿಸಿ, ಬಲಿ,ಜಪ, ಹವನದ ಬಳಿಕ ದೇವರ ಉತ್ಸವ ಮೂರ್ತಿಯನ್ನು ಅಲಂಕೃತ ಪಲ್ಲಕ್ಕಿಯಲ್ಲಿಟ್ಟು ವಿವಿಧ ವಾದ್ಯ ಮೇಳದೊಂದಿಗೆ ಮೆರವಣಿಗೆ ಮಾಡಲಾಯಿತು. ಮಹಾರಥಕ್ಕೆ ಪೂಜೆ ಸಲ್ಲಿಸಿದ ಬಳಿಕ ಶ್ರೀ ಉಮಾಮಧುಕೇಶ್ವರ ದೇವರ ಉತ್ಸವ ಮೂರ್ತಿಯನ್ನು ಮನ್ಮಹಾಸ್ಯಂದನ ರಥದಲ್ಲಿ ಪ್ರತಿಷ್ಟಾಪನೆ ಮಾಡಲಾಯಿತು. ಪ್ರತಿಷ್ಟಾಪನೆಯ ನಂತರ ಭಕ್ತರಿಗೆ ದರ್ಶನಕ್ಕಾಗಿ ಅವಕಾಶ ನೀಡಲಾಯಿತು. ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು, ಹಣ್ಣು ಕಾಯಿ ಸಮರ್ಪಿಸಿ ಭಕ್ತಿ ಮೆರೆದರು. ರಾತ್ರಿ 12ಗಂಟೆಯವರೆಗೆ ಸಾವಿರಾರು ಭಕ್ತರು ದರ್ಶನ ಪಡೆದರು. ರಾತ್ರಿ 12-30ಕ್ಕೆ ಮಹಾಮಂಗಳಾರತಿ ನೆರವೇರಿದ ಬಳಿಕ ಭಕ್ತರ ಹರ್ಷೋದ್ಗಾರದ ನಡುವೆ ಶ್ರೀ ಮಧುಕೇಶ್ವರ ದೇವರ ಮಹಾರಥೋತ್ಸವ ಆರಂಭಗೊಂಡಿತು. ಬೃಹತ್ ರುದ್ರಾಕ್ಷಿ ಮಾಲೆ, ವಿವಿಧ ಫಲ ಪುಷ್ಪ,ವಿದ್ಯುತ್ ದೀಪಗಳಿಂದ ಅಲಂಕರಿಸಿದ ಮಹಾರಥವನ್ನು ಭಕ್ತ ಸಮೂಹ ಹರಹರ ಮಹಾದೇವ ಎಂಬ ಜಯ ಘೋಷ ಮೊಳಗಿಸುತ್ತ ಎಳೆಯುತ್ತ ಸಾಗಿದರು. ವಿವಿಧ ವಾದ್ಯ ಮೇಳಗಳು ರಥೋತ್ಸವಕ್ಕೆ ಭಕ್ತಿಯ ಮೆರಗು ನೀಡಿತು. ನೆರೆದಿದ್ದ ಸಾವಿರಾರು ಭಕ್ತರು ಹೂ, ಬಾಳೆಹಣ್ಣು ರಥಕ್ಕೆ ಎಸೆದು ಭಕ್ತಿ ಸಮರ್ಪಿಸಿದರು. ವಯಸ್ಕರು, ಪುರುಷರು, ಮಹಿಳೆಯರು, ಮಕ್ಕಳು ಜಾತಿ ಭೇದವನ್ನು ಮರೆತು ಜಾತ್ರೆಯ ಸಂಭ್ರಮದಲ್ಲಿ ಪಾಲ್ಗೊಂಡರು. 4 ಗಂಟೆಗಳ ಕಾಲ ಜರುಗಿದ ಮಹಾ ರಥೋತ್ಸವ ಬುಧವಾರ ಮುಂಜಾನೆ 4 ರ ಹೊತ್ತಿಗೆ ಸಂಪನ್ನಗೊಂಡಿತು.

300x250 AD

ಐತಿಹಾಸಿಕ ಬನವಾಸಿಯ ಶ್ರೀ ಉಮಾಮಧುಕೇಶ್ವರ ಮಹಾ ರಥೋತ್ಸವಕ್ಕೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಶಿವರಾಮ್ ಹೆಬ್ಬಾರ್, ಕಾಂಗ್ರೆಸ್ ಮುಖಂಡ ವಿ.ಎಸ್.ಪಾಟೀಲ್, ಶಿರಸಿ ಗ್ರೇಡ್ 2 ತಹಶೀಲ್ದಾರ ರಮೇಶ ಹೆಗಡೆ ಆಗಮಿಸಿ ವಿಶೇಷ ಪೂಜೆ ನೆರವೇರಿಸಿ ದೇವರ ದರ್ಶನ ಪಡೆದರು.

Share This
300x250 AD
300x250 AD
300x250 AD
Back to top