Slide
Slide
Slide
previous arrow
next arrow

ಎಂ.ಎಂ ಕಾಲೇಜಿನಲ್ಲಿ ಮಹಾತ್ಮಾ ಗಾಂಧೀ-ಶಾಸ್ತ್ರಿಜೀ ಜಯಂತಿ ಆಚರಣೆ

300x250 AD

ಶಿರಸಿ: ಎಂ.ಇ.ಎಸ್ ನ ಎಂ.ಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಪ್ರಭಾರಿ ಪ್ರಾಚಾರ್ಯೆ ಡಾ.ಸುಜಾತಾ ಪಾತರಪೇಕರ್ ಗಾಂಧಿಯವರ ಹಾಗೂ ಲಾಲ ಬಹಾದ್ದೂರ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗಾಂಧಿ ಮತ್ತು ಶಾಸ್ತ್ರಿ ಯವರ ಜಯಂತಿಯನ್ನು ಆಚರಿಸಲಾಯಿತು.


ಎನ್.ಎಸ್.ಎಸ್ ಜಿಲ್ಲಾ ನೋಡಲ್ ಅಧಿಕಾರಿ ಪ್ರೊ.ಜಿ ಟಿ ಭಟ್, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಶ್ರಮದಾನದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಚಾರ್ಯೆ ದೇಶಕ್ಕೆ ಸ್ವಾತಂತ್ರ್ಯ ಸಿಗಲು ಗಾಂಧಿಯವರ ಪಾತ್ರ ಎಷ್ಟಿದೆಯೋ ಅಷ್ಟೇ ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲೂ ಗಾಂಧಿಯವರ ಕೊಡುಗೆ ಅಪಾರ. ಶಾಸ್ತ್ರೀಜಿಯವರು ಪ್ರಾಧಾನಿ ಆಗಿ ರಾಜಕೀಯಕ್ಕೆ ಆದರ್ಶವನ್ನು ನೀಡಿದವರು. ಇಬ್ಬರ ಆದರ್ಶಗಳು ಸರ್ವಕಾಲಕ್ಕೂ ಅನುಕರಣೀಯ ಎಂದರು.

300x250 AD


ಇದೇ ಸಂದರ್ಭದಲ್ಲಿ ಎನ್‌ಸಿಸಿ ವಿದ್ಯಾರ್ಥಿಗಳು ಆರೋಗ್ಯಕ್ಕಾಗಿ ಓಡು ಅಭಿಯಾನದಲ್ಲಿ ಪಾಲ್ಗೊಂಡರು. ಎನ್‌ಸಿಸಿ ಅಧಿಕಾರಿ ಡಾ.ಟಿ ಎಸ್ ಹಳೆಮನೆ ಅಭಿಯಾನದ ನೇತೃತ್ವ ವಹಿಸಿದ್ದರು.

Share This
300x250 AD
300x250 AD
300x250 AD
Back to top