Slide
Slide
Slide
previous arrow
next arrow

ಶಿಕ್ಷಣ-ಆರೋಗ್ಯ ಮಾನವನ ಎರಡು ಕಣ್ಣುಗಳು : ಆರ್. ವಿ. ದೇಶಪಾಂಡೆ

300x250 AD

ದಾಂಡೇಲಿ : ವಿದ್ಯಾರ್ಥಿಗಳು ತಮ್ಮ ದೈನಂದಿನ ಬದುಕಿನಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಬಹಳ ಮುಖ್ಯವಾದ ಮಹತ್ವ ನೀಡಬೇಕು. ಅವು ಮಾನವ ಬದುಕಿನ ಎರಡು ಕಣ್ಣುಗಳು ಇದ್ದಂತೆ. ಶಿಕ್ಷಣ ಜ್ಞಾನ ಮತ್ತು ಉದ್ಯೋಗವನ್ನು ನೀಡಿದರೆ ಆರೋಗ್ಯ ಜೀವನೋತ್ಸಾಹದ ಬದುಕನ್ನು ನೀಡುತ್ತದೆ. ವಿದ್ಯಾರ್ಥಿಗಳು ಮಾತ್ರ ಅಲ್ಲ ಎಲ್ಲರು ಶಿಕ್ಷಣ ಮತ್ತು ಆರೋಗ್ಯಕ್ಕೆ ಮಹತ್ವವನ್ನು ನೀಡಬೇಕು ಎಂದು ಕರ್ನಾಟಕ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷರು ಹಾಗೂ ಶಾಸಕರಾದ ಆರ್. ವಿ. ದೇಶಪಾಂಡೆ ಕರೆ ನೀಡಿದರು.

ಅವರು ಬುಧವಾರ ನಗರದ ಅಂಬೇವಾಡಿಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಧಾನ ಮಂತ್ರಿ ಉಷಾ ಯೋಜನೆಯಡಿ ಮಂಜೂರಾದ ಐದು ಕೋಟಿ ರೂಪಾಯಿಗಳ ಸಾಂಸ್ಥಿಕ ಅಭಿವೃದ್ದಿ ಯೋಜನೆಯನ್ನು ಉದ್ಘಾಟಿಸಿ ಹಾಗೂ ಗ್ರಂಥಾಲಯ, ಬಿ.ಸಿ.ಎ ಕಟ್ಟಡ ಹಾಗೂ ವ್ಯಾಯಾಮ ಶಾಲೆಗಳ ಕಟ್ಟಡ ನಿರ್ಮಾಣದ ಶಂಕುಸ್ಥಾಪನಾ ಸಮಾರಂಭವನ್ನು ನೆರವೇರಿಸಿ ಮಾತನಾಡಿದರು. ಭಾರತದ ಹತ್ತು ಸಾವಿರಕ್ಕು ಹೆಚ್ಚು ಕಾಲೇಜುಗಳು ಕೇಂದ್ರ ಸರ್ಕಾರಕ್ಕೆ ಐದು ಕೋಟಿ ರೂಪಾಯಿಗಳ ಸಾಂಸ್ಥಿಕ ಅಭಿವೃದ್ದಿ ಯೋಜನೆಗಾಗಿ ಅರ್ಜಿ ಸಲ್ಲಿಸಿದ್ದು, ಕೇವಲ ದೇಶದಾದ್ಯಂತ 300 ಕಾಲೇಜುಗಳು ಆಯ್ಕೆಯಾಗಿದ್ದು, ಕರ್ನಾಟಕದಿಂದ ಕೇವಲ 20 ಕಾಲೇಜುಗಳು ಆಯ್ಕೆಯಾಗಿದೆ. ಅವುಗಳಲ್ಲಿ ದಾಂಡೇಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೂಡ ಒಂದಾಗಿರುವುದು ಹೆಮ್ಮೆಯ ವಿಷಯ. ಇಲ್ಲಿಯ ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದ ಸಾಮೂಹಿಕ ಪ್ರಯತ್ನದಿಂದ ಈ ಮಾನ್ಯತೆ ದಕ್ಕಿದ್ದು ಅವರೆಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು. ಹೊಸ ಕಟ್ಟಡ ಕಾಮಗಾರಿಗಳ ನಿರ್ಮಾಣ, ನವೀಕರಣ ಮತ್ತು ಉನ್ನತೀಕರಣ, ಉಪಕರಣಗಳು ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಐದು ಕೋಟಿ ರೂಪಾಯಿಗಳ ಅನುದಾನದ ಹಂಚಿಕೆ ವಿವರಗಳನ್ನು ಸಭೆಗೆ ನೀಡಿದರು.

ಸಮಾರಂಭದಲ್ಲಿ ದಾಂಡೇಲಿ ನಗರಸಭೆಯ ಅಧ್ಯಕ್ಷ ಅಷ್ಪಾಕ್ ಶೇಖ, ತಹಶೀಲ್ದಾರ್ ಶೈಲೇಶ ಪರಮಾನಂದ, ನಗರಸಭೆಯ ಪೌರಾಯುಕ್ತ ವಿವೇಕ ಬನ್ನೆ, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಟಿ. ಸಿ. ಹಾದಿಮನಿ, ನಗರಸಭೆ ಸದಸ್ಯರಾದ ಮೋಹನ ಹಲವಾಯಿ, ಸಂಜಯ ನಂದ್ಯಾಳಕರ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಯಾಸ್ಮೀನ ಕಿತ್ತೂರ, ಬಶೀರ ಅಹಮ್ಮದ ಗಿರಿಯಾಲ, ಇಕ್ಬಾಲ ಶೇಖ, ರಫೀಕ ಖಾನ, ಸರಸ್ವತಿ ರಜಪೂತ ಉಪಸ್ಥಿತರಿದ್ದರು.

300x250 AD

ಪ್ರಾಚಾರ್ಯ ಡಾ. ಎಂ.ಡಿ. ಒಕ್ಕುಂದ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು, ಸಹ ಪ್ರಾಧ್ಯಾಪಕರಾದ ಬಸವರಾಜ ಹೂಲಿಕಟ್ಟಿ ವಂದಿಸಿದರು ಮತ್ತು ಮನೋಹರ ಉಡಚಂಚಿ ಕಾರ್ಯಕ್ರಮ ನಿರೂಪಿಸಿದರು.

Share This
300x250 AD
300x250 AD
300x250 AD
Back to top