ದಾಂಡೇಲಿ : ನಗರದ ಕೆ.ಸಿ.ವೃತ್ತದ ಹತ್ತಿರ ರಸ್ತೆಗೆ ಹಾಕಲಾದ ಡಾಂಬರ್ ಹಾಕಿ ಕೆಲವೇ ದಿನಗಳೊಳಗೆ ರಸ್ತೆಯಲ್ಲಿ ಗುಂಡಿ ಬಿದ್ದು, ವಾಹನ ಸವಾರರಿಗೆ ಸಂಕಷ್ಟ ಎದುರಾಗಿದೆ. ಇಲ್ಲಿ ಗುಂಡಿ ಬಿದ್ದ ಹಿನ್ನಲೆಯಲ್ಲಿ ದ್ವಿಚಕ್ರ ವಾಹನ ಸವಾರರು ಬೀಳುತ್ತಿರುವುದು ಸಾಮಾನ್ಯ ಎಂಬಂತಾಗಿದೆ. ಇಲ್ಲಿ ಅಸಮರ್ಪಕವಾಗಿ ಡಾಂಬರ್ ಹಾಕಿರುವುದರಿಂದ ಈ ಸ್ಥಿತಿ ನಿರ್ಮಾಣವಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ವಾಹನಗಳು ಸಂಚರಿಸುವ ಹಾಗೂ ಜನರು ಓಡಾಡುವ ರಸ್ತೆ ಇದಾಗಿರುವುದರಿಂದ, ಈ ರಸ್ತೆಯಲ್ಲಿ ವೇಗವಾಗಿ ಬರುವ ವಾಹನಗಳಿಗೆ ಈ ಗುಂಡಿಯಿಂದಾಗಿ ಸಂಚಕಾರ ಕಟ್ಟಿಟ್ಟ ಬುತ್ತಿ ಎಂಬಂತಾಗಿದೆ.
ಇನ್ನಷ್ಟು, ಮತ್ತಷ್ಟು ಅವಘಡಗಳು ಸಂಭವಿಸುವ ಮುನ್ನ ಸಂಬಂಧಪಟ್ಟವರು ಇತ್ತ ಕಡೆ ಗಮನಹರಿಸಿ, ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ಸ್ಥಳೀಯರು ಮಾಧ್ಯಮದ ಮೂಲಕ ಆಗ್ರಹಿಸಿದ್ದಾರೆ.