ಕಾರವಾರ: ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಅದರ ಅಡಿಯಲ್ಲಿ ಬರುವ ಇತರೆ ನಿಗಮಗಳಾದ ವಿಶ್ವಕರ್ಮ, ಮರಾಠಾ, ವೀರಶೈವ ಲಿಂಗಾಯತ, ಒಕ್ಕಲಿಗ, ಅಲೆಮಾರಿ, ಮಡಿವಾಳ, ಸವಿತಾ, ಉಪ್ಪಾರ, ಅಂಬಿಗರ ಚೌಡಯ್ಯ ಕಾಡುಗೊಲ್ಲ , ಆರ್ಯ ವೈಶ್ಯ ನಿಗಮಗಳಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಉನ್ನತ ವ್ಯಾಸಂಗ ಪಡೆಯಲು ಸಿ.ಇ.ಟಿ. ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ, ಅರಿವು ಶೈಕ್ಷಣಿಕ ಸಾಲ ಹೊಸತು ಹಾಗೂ ನವೀಕರಣ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ (ಬ್ಯಾಂಕುಗಳ ಸಹಯೋಗದೊಂದಿಗೆ), ವಿದೇಶಿ ವಿಶ್ವವಿದ್ಯಾಲಯ ಉನ್ನತ ವ್ಯಾಸಂಗ ಸಾಲ ಯೋಜನೆ, ಮಿಲಿಟ್ರಿ ಹೊಟೇಲ್ ಯೋಜನೆ (ಮರಾಠ ನಿಗಮ), ವಿಭೂತಿ ಘಟಕ ನಿರ್ಮಾಣ (ವೀರಶೈವ ಲಿಂಗಾಯತ ನಿಗಮ) ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ, (ಡಿ. ದೇವರಾಜ ಅರಸು ನಿಗಮ) ಸ್ವಾತಂತ್ರ ಅಮೃತ ಮುನ್ನಡೆ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವ ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಒನ್, ಕರ್ನಾಟಕ ಒನ್ಗಳ ಮೂಲಕ ಹಾಗೂ ಸ್ವಾತಂತ್ರ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ತಂತ್ರಾಶದ https://www.kaushalkar.com ನಲ್ಲಿ ಜೂ.30 ರೊಳಗೆ ಅರ್ಜಿ ಸಲ್ಲಿಸಬಹುದು.
ನಿರುದ್ಯೋಗಿ ಯುವಕ-ಯುವತಿಯರು ಕೈಗೊಳ್ಳುವ ವಿವಿಧ ಆರ್ಥಿಕ ಚಟುವಟಿಕೆಗಳಿಗೆ ಅನುಗುಣವಾಗಿ ನಿಗಮದಿಂದ ಚೈತನ್ಯ ಸಹಾಯಧನ ಯೋಜನೆಯನ್ನು ಬ್ಯಾಂಕುಗಳ ಸಹಯೋಗದೊಂದಿಗೆ ಅನುಷ್ಠಾನಗೊಳಿಸುತ್ತಿದ್ದು ಗರಿಷ್ಠ 1 ಲಕ್ಷಗಳವರೆಗೆ ಸಾಲ ಸೌಲಭ್ಯ ನೀಡಲಾಗುವುದು, ಇದರಲ್ಲಿ ನಿಗಮದಿಂದ ಗರಿಷ್ಠ 20% ಗಳವರೆಗೆ ಸಹಾಯಧನ ಲಭ್ಯ ಇರುತ್ತದೆ. ಉಳಿದ ಹಣವನ್ನು ಬ್ಯಾಂಕ್ ಶಾಖೆಗಳು ಬ್ಯಾಂಕ್ ನಿಯಮಾನುಸಾರ ನೀಡುವುದಾಗಿರುತ್ತದೆ. ಅಲ್ಲದೇ ನಿಗಮದಿಂದಲೇ ನೇರವಾಗಿ ಸ್ವಯಂ ಉದ್ಯೋಗ ಸಾಲ, ಅರಿವು ಶೈಕ್ಷಣಿಕ ಸಾಲ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ, ಉನ್ನತ ವ್ಯಾಸಂಗಕ್ಕೆ ಸಾಲವನ್ನು ನೀಡಲಾಗುತ್ತಿದೆ.
ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಸಲ್ಲಿಸ ಬಯಸುವವರು ಅವರ ಕುಟುಂಬದ ವಾರ್ಷಿಕ ವರಮಾನ ರೂ. 98,000/-ಕ್ಕಿಂತ ಕಡಿಮೆ ಇರಬೇಕು. ಜಮೀನು 1 ಎಕರೆಯಿಂದ 5 ಎಕರೆ ಒಳಗಿರಬೇಕು. ಕಂದಾಯ ಇಲಾಖೆಯಿಂದ ಸಣ್ಣ ಹಿಡುವಳಿಯ ಪ್ರಮಾಣ ಪತ್ರ ಹೊಂದಿರಬೇಕು. ಜಮೀನಿಗೆ ಯಾವುದೇ ನೀರಾವರಿ ಸೌಲಭ್ಯ ಹೊಂದಿರಬಾರದು.
ಅರಿವು ಶೈಕ್ಷಣಿಕ ಸಾಲ ಪಡೆಯ ಬಯಸುವ ವಿದ್ಯಾರ್ಥಿಗಳು ಸಿ.ಇ.ಟಿ. ಮೂಲಕ ಆಯ್ಕೆಯಾದ ಕೋರ್ಸುಗಳಿಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಕುಟುಂಬದ ವಾರ್ಷಿಕ ವರಮಾನ ರೂ.3.50 ಲಕ್ಷಗಳ ಮಿತಿಯಲ್ಲಿರಬೇಕು. ಸಿ.ಇ.ಟಿ. ಪ್ರವೇಶ ಪತ್ರ, ವ್ಯಾಸಂಗದ ಪ್ರಮಾಣ ಪತ್ರ, ಜಾತಿ ಆದಾಯ, ಇತ್ಯಾದಿ ಪ್ರಮಾಣ ಪತ್ರವನ್ನು ಹೊಂದಿರಬೇಕು.
ಸ್ವಾವಲಂಬಿ ಸಾರಥಿ ಯೊಜನೆ ನಾಲ್ಕು ಚಕ್ರದ ವಾಹನ ಖರೀದಿಗೆ ಬ್ಯಾಂಕಗಳಿಂದ ಪೆಡೆಯುವ ಸಾಲಕ್ಕೆ ಶೇ.50 ರಷ್ಟು ಗರಿಷ್ಟ ರೂ. 3 ¯ಕ್ಷ ಸಹಾಯಧನ ಮಂಜೂರು ಮಾಡಲಾಗುವುದು ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ 1ಎ, 2ಎ, 3ಎ ಮತ್ತು 3ಬಿಗೆ ಸೇರಿದವರಾಗಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ 1,20,000/-ಗಳ ಮೀತಿಯಲ್ಲಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.
ಹೊಲಿಗೆ ಯಂತ್ರ ವಿತರಣೆ ಯೋಜನೆ: ಹಿಂದುಳಿದ ವರ್ಗಗಳ ಬಡ ಕುಟುಂಬದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಅರ್ಜಿಯ ಝೆರಾಕ್ಸ್ ಪ್ರತಿ ಹಾಗೂ ಎಲ್ಲಾ ಅಗತ್ಯ ದಾಖಲೆಗಳನ್ನು ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಹೈ ಚರ್ಚ ಹತ್ತಿರ, ಕಾರವಾರ -580301 ವಿಳಾಸಕ್ಕೆ ಸಲ್ಲಿಸಬೇಕು
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್: http://www.dbcdc.karnataka.gov.in ನ್ನು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ:Tel:+9108382223229 ಅಥವಾ Tel:+9108022374832,Tel:+918050770004 ನ್ನು ಸಂಪರ್ಕಿಸುವ0ತೆ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ನಿಗಮಗಳಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
