ಶಿರಸಿ: ಶಿರಸಿ-ಕುಮಟಾ ರಸ್ತೆ ನಿರ್ಮಾಣ ಕಾಮಗಾರಿಯು ಭರದಿಂದ ಸಾಗುತ್ತಿದ್ದು, ಈ ಮಾರ್ಗದಲ್ಲಿ ಸುಗಮ ವಾಹನ ಸಂಚಾರಕ್ಕಾಗಿ ಬೆಣ್ಣೆಹೊಳೆ ಸೇತುವೆಯ ಎಡಭಾಗದ ಅಪ್ರೋಚ್ ಸ್ಲಾಬ್ ಗಳ ಜೋಡಣೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದ್ದು, ಪ್ರಸ್ತುತ ಲಘು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಈ ರಸ್ತೆ ನಿರ್ಮಾಣದಲ್ಲಿ ಬಾಕಿ ಉಳಿದಿರುವ ಸೇತುವೆಗಳ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಮತ್ತು ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರು ಮತ್ತು ವಾಹನ ಸವಾರರಿಗೆ ತೊಂದರೆಯಾಗದಂತೆ ನಿಯಮಾನುಸಾರ ಗರಿಷ್ಠ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ, ಈ ರಸ್ತೆ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಸಂಸ್ಥೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ಸೂಚನೆ ನೀಡಿದ್ದಾರೆ.
ಬೆಣ್ಣೆಹೊಳೆ ಸೇತುವೆಯ ಎಡಭಾಗ ಲಘು ವಾಹನ ಸಂಚಾರಕ್ಕೆ ಮುಕ್ತ
