Slide
Slide
Slide
previous arrow
next arrow

ಶ್ರೀನಿಕೇತನ ಶಾಲೆಯಲ್ಲಿ ಪರಿಸರ ದಿನಾಚರಣೆ

300x250 AD

ಶಿರಸಿ: ತಾಲೂಕಿನ ಇಸಳೂರಿನ ಶ್ರೀನಿಕೇತನ ಶಾಲೆಯ ಇಕೋ ಕ್ಲಬ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನವನ್ನು ಜೂ:5, ಗುರುವಾರದಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಭಾಷಣದ ಮೂಲಕ ಪರಿಸರದ ಬಗ್ಗೆ ಕಾಳಜಿ ಹಾಗೂ ಪ್ಲಾಸ್ಟಿಕ್‌ನ ದುಷ್ಪರಿಣಾಮಗಳ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದರು.

300x250 AD

ಉಪಪ್ರಾಂಶುಪಾಲೆ ಶ್ರೀಮತಿ ವಸುಧಾ ಹೆಗಡೆ ಮಾತನಾಡಿ ಮರಗಿಡಗಳ ಮಹತ್ವ ಹಾಗೂ ಅವುಗಳ ಸಂರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಸಿದ್ದ ಪರಿಸರ ಪ್ರೇಮಿ ಸುಂದರಲಾಲ್ ಬಹುಗುಣಾ ಇವರು ನಡೆಸಿದ್ದ ಚಿಪ್ಕೋ/ಅಪ್ಪಿಕೋ ಚಳುವಳಿಯ ಬಗ್ಗೆ ಮಾಹಿತಿ ನೀಡಿದರು. ಅನಂತರ ಮಕ್ಕಳಿಗೆ ಪರಿಸರ ಸಂರಕ್ಷಣೆಯ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.
ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕ ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ಸರಸ್ವತಿ ವನದಲ್ಲಿ ವೃಕ್ಷಾರೋಪಣವನ್ನು ನಡೆಸಲಾಯಿತು. ಶಾಲೆಯ ಸ್ಕೌಟ್‌ಗೈಡ್ಸ್ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಮಾವು, ತೆಂಗು ಹಾಗೂ ಬಾದಾಮಿ ಸಸಿಗಳನ್ನು ನೆಟ್ಟು ಸಂತಸಪಟ್ಟರು.

Share This
300x250 AD
300x250 AD
300x250 AD
Back to top