Slide
Slide
Slide
previous arrow
next arrow

ಕಾಲ್ತುಳಿತದಲ್ಲಿ ಮೃತಪಟ್ಟ ಅಕ್ಷತಾ ಕುಟುಂಬಕ್ಕೆ ಪರಿಹಾರಧನ ಚೆಕ್ ವಿತರಣೆ

300x250 AD

ಸಿದ್ದಾಪುರ: ಆರ್.ಸಿ.ಬಿ.ಯ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ‌ ಸ್ಟೇಡಿಯಂನಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟ ಸಿದ್ದಾಪುರದ ಅಕ್ಷತಾ ಅಂಬಳಿ ಕುಟುಂಬಕ್ಕೆ‌ ಸರ್ಕಾರದ ಪರವಾಗಿ ಜಿಲ್ಲಾಡಳಿತದ ವತಿಯಿಂದ 25 ಲಕ್ಷ ರೂ.ಗಳ ಚೆಕ್ ನೀಡಲಾಯಿತು.

ಸೋಮವಾರ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ಹಾಗೂ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಮೃತ ಅಕ್ಷತಾಳ ರವೀಂದ್ರನಗರದ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸರ್ಕಾರದ 25 ಲಕ್ಷ ರೂ.ಗಳ ಚೆಕ್ ವಿತರಿಸಿದರು. ಈ ವೇಳೆ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣ‌ ಅತ್ಯಂತ ದುರದೃಷ್ಟ ಸಂಗತಿಯಾಗಿದೆ. ಈ ರೀತಿ ಯಾರಿಗೂ ಆಗಬಾರದು. ಮೃತರ ಕುಟುಂಬಸ್ಥರಿಗೆ ಸರ್ಕಾರದ ವತಿಯಿಂದ 25 ಲಕ್ಷ ರೂ. ಪರಿಹಾರವನ್ನು ಮನೆಗೆ ತೆರಳಿ ನೀಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಚೆಕ್ ನೀಡಲಾಗಿದೆ. ಮುಂದೆಂದು ಇಂತಹ ಘಟನೆಗಳು ನಡೆಯಬಾರದು. ಜತೆಗೆ ಸಾರ್ವಜನಿಕರು ಕೂಡ ಸ್ವಲ್ಪ ಜಾಗೃತೆ ವಹಿಸಬೇಕುವೆ ಎಂದ ಅವರು,ಮೃತ ಅಕ್ಷತಾಳ ಆತ್ಮಕ್ಕೆ‌ ಭಗವಂತ ಚಿರಶಾಂತಿ ನೀಡಲಿ ಹಾಗೂ ಕುಟುಂಬಸ್ಥರಿಗೆ ದುಖಃ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ಪ್ರಾರ್ಥಿಸಿದರು.

300x250 AD

ಈ ಸಂದರ್ಭದಲ್ಲಿ ಸಿದ್ದಾಪುರ ಪಟ್ಟಣ ಪಂಚಾಯತ ಅಧ್ಯಕ್ಷೆ ಚಂದ್ರಕಲಾ ನಾಯ್ಕ, ಉಪಾಧ್ಯಕ್ಷ ವಿನಯ ಹೊನ್ನೆಗುಂಡಿ, ಸ್ಥಾಯಿ ಸಮಿತಿ ಅಧ್ಯಕ್ಷ ವಿಜೇಂದ್ರ ಗೌಡರ್, ಉಪವಿಭಾಗಾಧಿಕಾರಿ ಕಾವ್ಯಾರಾಣಿ ಕೆ.ವಿ., ತಾಲೂಕಾ ದಂಡಾಧಿಕಾರಿ ಎಂ.ಆರ್.ಕುಲಕರ್ಣಿ, ಸಿಪಿಐ ಜೆ.ಬಿ.ಸೀತಾರಾಮ ಮತ್ತಿತರರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top