ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕು.ಕ. ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ, ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಸೇಂಟ್ ಜೊಸೇಫ್ ಪದವಿ ಪೂರ್ವ ಕಾಲೇಜು ಸಭಾಭವನದಲ್ಲಿ ಗುರುವಾರ ಆಯೋಜಿಸಲಾದ ‘ವಿಶ್ವ ತಂಬಾಕು ರಹಿತ ದಿನವನ್ನು’ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಮ್ ಉದ್ಘಾಟಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಕಾರ್ಯಕ್ರಮಾಧಿಕಾರಿ ಡಾ. ಅರ್ಚನಾ ನಾಯಕ ವಿಶ್ವ ತಂಬಾಕು ರಹಿತ ದಿನಾಚರಣೆ ಮತ್ತು ಧ್ಯೇಯ ವಾಕ್ಯ “ಆಕರ್ಷಕ ಉತ್ಪನ್ನಗಳು-ಕರಾಳ ಉದ್ದೇಶಗಳು, ತಂಬಾಕು ಮತ್ತು ನಿಕೋಟಿನ್ ಉದ್ಯಮಗಳ ಮುಖವಾಡ ಬಿಚ್ಚಿಡುವುದರ” ಕುರಿತು ಪ್ರಾಸ್ತವಿಕವಾಗಿ ಮಾತನಾಡಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಪ್ರೇಮಕುಮಾರ ನಾಯ್ಕ ತಂಬಾಕು ಸೇವನೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಕಾರವಾರದ ಸೇಂಟ್ ಜೊಸೇಫ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಫಾದರ್ ಸ್ಟಾö್ಯನಿ ಪಿಂಟೋ, ತಾಲೂಕಾ ಆರೋಗ್ಯಾಧಿಕಾರಿ ಡಾ.ಸುಧೀತಾ ಪೆಡ್ನೇಕರ ಮತ್ತು ಸಮಾಜ ಕಾರ್ಯಕರ್ತ ಗೋರೇಸಾಬ ನದಾಫ ಉಪಸ್ಥಿತರಿದ್ದರು. ವೃಂದಾ ತಾಮ್ಸೆ ವಂದಿಸಿದರು.
ವಿಶ್ವ ತಂಬಾಕು ರಹಿತ ದಿನ ಆಚರಣೆ
