ಶಿರಸಿ: ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಶಿರಸಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳಗೇರಿ ಪ್ರದೇಶಗಳಾದ ಗಣೇಶ ನಗರ, ಗೋಸಾವಿ ಗಲ್ಲಿಗಳಲ್ಲಿ ಸಾರ್ವಜನಿಕರಿಗೆ ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು,
ಶಿರಸಿ ಉಪ ವಿಭಾಗದ ಡಿಎಸ್ಪಿ ಶ್ರೀಮತಿ ಗೀತಾ ಪಾಟೀಲ್, ವೃತ್ತ ನಿರೀಕ್ಷಕರಾದ ಶಶಿಕಾಂತ ವರ್ಮಾ ಮಾರ್ಗದರ್ಶನದಲ್ಲಿ ನಗರ ಠಾಣೆ ಪಿಎಸ್ಐ ನಾಗಪ್ಪ ಬಿ. ನೇತೃತ್ವದಲ್ಲಿ ನಾರಾಯಣ ರಾಠೋಡ್ ಪಿಎಸ್ಐ (ತನಿಖೆ),ಎಎಸ್ಐ ಸುರೇಶ್ ಗೊಂಜಾಳಿ,ನಾಗಪ್ಪ ಲಮಾಣಿ ಜಾಗೃತಿ ಮೂಡಿಸಿದರು.