Slide
Slide
Slide
previous arrow
next arrow

ಕರ್ಕಿ ಸ್ವಾಮೀಜಿಗಳ ಚಾತುರ್ಮಾಸ್ಯ ಆಮಂತ್ರಣ ಪತ್ರಿಕೆಗೆ ಪೂಜೆ

300x250 AD

ಸಿದ್ದಾಪುರ : ಕರ್ಕಿ ದೈವಜ್ಞ ಮಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮಿಗಳವರ ಹಾಗೂ ಶ್ರೀ ಸುಜ್ಞಾನೇಶ್ವರ ಭಾರತಿ ಮಹಾಸ್ವಾಮಿಗಳವರ ಚಾತುರ್ಮಾಸ್ಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಗೆ ಪಟ್ಟಣದ ಲಕ್ಷ್ಮಿನಾರಾಯಣ ದೇವಾಲಯದಲ್ಲಿ ಪೂಜೆ ಸಲ್ಲಿಸಿ ತಾಲೂಕಿನಲ್ಲಿ ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ ನೀಡಲಾಯಿತು.

ದಾವಣಗೆರೆಯ ದೈವಜ್ಞ ಕಲ್ಯಾಣ ಮಂಟಪದಲ್ಲಿ  ಜು.10 ರಿಂದ ಸೆಪ್ಟೆಂಬರ್ 7 ರವರೆಗೆ ಶ್ರೀಗಳವರ ಚಾತುರ್ಮಾಸ್ಯ ಜರುಗಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ತಾಲೂಕಿನಾದ್ಯಂತ ವಿತರಣೆ ಮಾಡಲು ದಾವಣಗೆರೆಯ ದೈವಜ್ಞ ಬ್ರಾಹ್ಮಣ ಸಮಾಜದ ಅಧ್ಯಕ್ಷ ಹಾಗೂ ಚಾತುರ್ಮಾಸ್ಯ ಕಮಿಟಿ ಅಧ್ಯಕ್ಷ ಪ್ರಶಾಂತ  ವಿ. ವೆರ್ಣೆಕರ ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ ನೀಡಿದರು.
ಕಾರ್ಯಾಧ್ಯಕ್ಷ ಸತೀಶ ಎಸ್. ಸಾನು, ರಾಘವೇಂದ್ರ ಡಿ. ವೆರ್ಣೆಕರ, ವಿನೋದ್ ಆರ್. ವೆರ್ಣೆಕರ, ಸಿದ್ದಾಪುರ ದೈವಜ್ಞ ಬ್ರಾಹ್ಮಣ ಸಮಾಜದ ಅಧ್ಯಕ್ಷ ಶಾಂತರಾಮ ವಿ.ಶೇಟ,ಸಮಾಜದ ವಿವಿಧ ಮಂಡಳಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮಹಿಳಾ ಮಂಡಳಿಯವರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top