Slide
Slide
Slide
previous arrow
next arrow

ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಮೇಶ ಕಾಂಬಳೆ ವಿಧಿವಶ

300x250 AD

ದಾಂಡೇಲಿ : ತಾಲೂಕಿನ ಭಾರತೀಯ ಜನತಾ ಪಾರ್ಟಿಯ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ಹಾಲಿ 3ನಂ ನಂಬರ್ ಗೇಟ್ ಹತ್ತಿರದಲ್ಲಿರುವ ವಿನಾಯಕ ನಗರದ ನಿವಾಸಿ ರಮೇಶ ವೆಂಕಪ್ಪ ಕಾಂಬಳೆ ಅವರು ವಿಧಿವಶರಾಗಿದ್ದಾರೆ. ಮೃತರಿಗೆ 48 ವರ್ಷ ವಯಸ್ಸಾಗಿತ್ತು.

ಸರಳ ಸಜ್ಜನಿಕೆಯ ವ್ಯಕ್ತಿತ್ವದವರಾಗಿದ್ದ ರಮೇಶ ಕಾಂಬಳೆ ಕಳೆದ ಅನೇಕ ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ತನ್ನನ್ನು ತಾನು ಗುರುತಿಸಿಕೊಂಡು ಪಕ್ಷ ಸಂಘಟನೆಗಾಗಿ ಶ್ರಮಿಸಿದ್ದರು. ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಕಾರ್ಮಿಕರಾಗಿದ್ದ ರಮೇಶ ಕಾಂಬಳೆ ಅವರು ಶ್ರೀ ಅಯ್ಯಪ್ಪ ಸ್ವಾಮಿಯ ಆರಾಧಕರಾಗಿದ್ದರು. ಕಳೆದ ಹಲವಾರು ವರ್ಷಗಳೀಂದ ಪ್ರತಿ ವರ್ಷವೂ ಶ್ರೀ ಕ್ಷೇತ್ರ ಶಬರಿಮಲೆ ಯಾತ್ರೆಯನ್ನು ಕೈಗೊಳ್ಳುತ್ತಿದ್ದರು.

300x250 AD

ಸಾಮಾಜಿಕ ಸಮಸ್ಯೆಗಳ ಬಗ್ಗೆ ಸದಾ ಧ್ವನಿಯಾಗಿದ್ದ ಹಾಗೂ ಸಮಾಜಮುಖಿ ವ್ಯಕ್ತಿತ್ವವನ್ನು ಹೊಂದಿದ್ದ ರಮೇಶ ಕಾಂಬಳೆ ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು. ಅಂತಿಮವಾಗಿ ಚಿಕಿತ್ಸೆ ಫಲಕಾರಿಯಾಗದೆ  ವಿಧಿವಶರಾಗಿದ್ದಾರೆ.  ಮೃತರು ಪತ್ನಿ, ಇಬ್ಬರು ಸಹೋದರಿಯರು, ಪುತ್ರಿ ಮತ್ತು ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಸಂಖ್ಯೆಯಲ್ಲಿ ಬಂದು ಬಳಗವನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ತಾಲೂಕಿನ ಗಣ್ಯರನೇಕರು ಕಂಬನಿಯನ್ನು ಮಿಡಿದು ಸಂತಾಪವನ್ನು ಸೂಚಿಸಿದ್ದಾರೆ.

Share This
300x250 AD
300x250 AD
300x250 AD
Back to top