ದಾಂಡೇಲಿ : ಪಂಚ ಗ್ಯಾರಂಟಿ ಯೋಜನೆಯ ಕುರಿತಂತೆ ನಗರದ ಅಂಬೇವಾಡಿಯಲ್ಲಿರುವ ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ ಪ್ರಗತಿ ಪರಿಶೀಲನಾ ಸಭೆಯು ಜರುಗಿತು.
ತಾಲೂಕು ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷ ರಿಯಾಜ್ ಬಾಬು ಸೈಯದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಪಂಚ ಗ್ಯಾರಂಟಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಹಾಗೂ ಈ ಯೋಜನೆಗೆ ಸಂಬಂಧಪಟ್ಟಂತೆ ಇರುವ ಕುಂದುಕೊರತೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು, ಅರ್ಹ ಫಲಾನುಭವಿಗಳು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಶ್ರಮಿಸಬೇಕೆಂದು ತಾಲೂಕು ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷ ರಿಯಾಜ್ ಬಾಬು ಸೈಯದ್ ಅವರು ಸೂಚನೆಯನ್ನು ನೀಡಿದರು.
ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಅನುಷ್ಠಾನ ಸಮಿತಿಯ ಸದಸ್ಯರಾದ ರವಿ ಚಾಟ್ಲಾ, ದೇವೇಂದ್ರಪ್ಪ ಹನುಮಶೆಟ್, ರಮೇಶ ಶೆಟ್ಟಣ್ಣನವರ, ದಾವಲಸಾಬ್ ನೀರಲಗಿ, ಪರಶುರಾಮ, ವೀರೇಶ ಯರಗೇರಿ, ಅಡಿವೆಪ್ಪ ಭದ್ರಕಾಳಿ, ಅಶೋಕ ನಾಯ್ಕ, ಸಿದ್ದರಾಜ್ ಗಜಗಲ್, ಜಾನು ವಿಠ್ಟು, ರೇಷ್ಮಾ ಇಮ್ತಿಯಾಜ್ ಮತ್ತು ಛಾಯಾ ಪಿಶಾಲೆ ಉಪಸ್ಥಿತರಿದ್ದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.