Slide
Slide
Slide
previous arrow
next arrow

ಯುವಕರು ಉತ್ತಮ ಜೀವನಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಪಿಎಸ್ಐ ರವಿ ಗುಡ್ಡಿ

300x250 AD

ಕುಮಟಾ: ಸ್ಥಳೀಯ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ “ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನ”ವನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾನವನ ಬಳಕೆಗೆ ಮತ್ತು ಸೇವನೆಗೆ ಯೋಗ್ಯ ವಸ್ತುಗಳು ಯಾವುವು, ಮಾದಕ ವ್ಯಸನದಿಂದ ಉಂಟಾಗುವ ಪರಿಣಾಮ, ಸೈಬರ್ ಅಪರಾಧಗಳು, ಸಂಚಾರಿ ನಿಯಮಗಳ ಕುರಿತು ಹಾಗೂ ಯುವಕರು ಮಾದಕ ವಸ್ತುಗಳಿಂದ ದೂರವಿರಿ ಎಂದು ಕುಮಟಾದ ಪೋಲೀಸ್ ಠಾಣೆಯ ಪಿ.ಎಸ್.ಐ ರವಿ ಗುಡ್ಡಿ ಹೇಳಿದರು.

300x250 AD

ಕಾರ್ಯಕ್ರಮವನ್ನು ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಪ್ರೀತಿ ಪಿ. ಭಂಡಾರಕರ ದೇಶದ ಕಾನೂನು ವ್ಯವಸ್ಥೆಯನ್ನು ಗೌರವಿಸಿ, ದೇಶ ಕಟ್ಟುವ ಕಾರ್ಯವನ್ನು ಪ್ರತಿಯೊಬ್ಬ ಪ್ರಜೆಯು ಪಾಲ್ಗೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ರೋಹನ ಮತ್ತು ಸನತ್ ಸಂಗಡಿಗರು ಪ್ರಾರ್ಥಿಸಿದರು. ಶಿಕ್ಷಕ ವಿದ್ಯಾರ್ಥಿನಿ ಸುಮಿತ್ರಾ ಪೂಜಾರ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಶ್ರೀಮತಿ ರೇಖಾ ಸಿ.ಯಲಿಗಾರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪನ್ಯಾಸಕರಾದ ಎಸ್.ಕೆ.ಭಟ್ ಉದ್ಘಾಟಕರನ್ನು ಸಭೆಗೆ ಪರಿಚಯಿಸಿದರು. ಶಿಕ್ಷಕ ವಿದ್ಯಾರ್ಥಿನಿ ಸ್ನೇಹಾ ನಾಯ್ಕ ವಂದಿಸಿದರು. ಶಿಕ್ಷಕ ವಿದ್ಯಾರ್ಥಿ ಅಂಬರೀಶ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

Share This
300x250 AD
300x250 AD
300x250 AD
Back to top