ಕುಮಟಾ: ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ, ಪೆÇಲೀಸ್ ಇಲಾಖೆ, ಅರಣ್ಯ ಇಲಾಖೆ, ತಾಲೂಕು ಆಡಳಿತ ಕುಮಟಾ ಹಾಗೂ ಲಾಯನ್ಸ್ ಕ್ಲಬ್ ಗೋಕರ್ಣದ ಸಂಯುಕ್ತ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಕಾಶ ನಾಯಕ ಗಿಡ ನೆಡುವ ಮೂಲಕ ಉದ್ಘಾಟಿಸಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ನರೇಂದ್ರ ಬಿ ಆರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ವಕೀಲರ ಸಂಘದ ಅಧ್ಯಕ್ಷ ಆರ್.ಜಿ ನಾಯ್ಕ, ಕುಮಟಾ ಎಸಿಎಫ್ ಗುರುದತ್ತ ಶೇಟ್, ತಾಪಂ ಆಡಳಿತಾಧಿಕಾರಿ ಈಶ್ವರ ನಾಯ್ಕ , ತಾಪಂ ಇಒ ಸಿ.ಟಿ ನಾಯ್ಕ, ಸಹಾಯಕ ಸರ್ಕಾರಿ ಅಭಿಯೋಜಕ ಮಂಜುನಾಥ ಬೋರಕರ್ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಅರಣ್ಯ ಅಧಿಕಾರಿಗಳು ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಾಗ ಕಡ್ಡಾಯವಾಗಿ ಅನುಸರಿಸಬೇಕಾದ ನಿಯಮಾವಳಿಗಳ ಬಗ್ಗೆ ವಕೀಲ ಎಂ ಜಿ ಸಭಾಹಿತ್ ಉಪನ್ಯಾಸ ನೀಡಿದರು.