Slide
Slide
Slide
previous arrow
next arrow

ಗಾಂಧೀಜಿ ತೋರಿದ ಮಾರ್ಗದಲ್ಲಿ ನಡೆಯಿರಿ; ಉಪೇಂದ್ರ ಪೈ

300x250 AD

ಶಿರಸಿ: ಮಹಾತ್ಮ ಗಾಂಧೀಜಿ ಅವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಶಿರಸಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು.


ನಗರದ ಬಿಡ್ಕಿಬೈಲ್ ನಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾತನಾಡಿದರು. ಗಾಂಧಿ ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ಸಾಗಬೇಕು. ಅಹಿಂಸೆ ಮತ್ತು ಸತ್ಯದ ಹಾದಿಯಲ್ಲಿ ಹೋರಾಟ ಮಾಡಬಹುದು ಎಂದು ಜಗತ್ತಿಗೆ ತೋರಿಸಿಕೊಟ್ಟ ಮಹಾತ್ಮನನ್ನು ನೆನೆಯುವುದು ಮಾತ್ರವಲ್ಲ, ಅವರ ವಿಚಾರ ಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

300x250 AD

ಈ ಸಂದರ್ಭದಲ್ಲಿ ಶಿರಸಿ ಜಿಲ್ಲಾ ಹೋರಾಟ ಸಮಿತಿಯ ಎಮ್ ಎಮ್ ಭಟ್, ಪರಮಾನಂದ ಹೆಗಡೆ, ಮಹಾದೇವ ಶಾನಭಾಗ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top