• Slide
    Slide
    Slide
    previous arrow
    next arrow
  • ಸಾಗರಮಾಲಾ ಯೋಜನೆ ವೇಗ ಪಡೆಯಲಿ; ಸಂಸದ ಅನಂತಕುಮಾರ ಆಗ್ರಹ

    300x250 AD

    ಶಿರಸಿ: ಭಾರತದ ಸಾಗರ ವಲಯವನ್ನು ಬಲಪಡಿಸುವ ಪ್ರಧಾನಮಂತ್ರಿ ಅವರ ದೂರದೃಷ್ಟಿ ಯೋಜನೆಗಳಿಗೆ ಅನುಮೋದನೆ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಕೇಂದ್ರದ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವ ಸರ್ಬಾನಂದ ಸೋನವಾಲರವರಿಗೆ ಸಂಸದ ಅನಂತಕುಮಾರ ಹೆಗಡೆ ಪತ್ರ ಮುಖೇನ ಆಗ್ರಹಿಸಿದ್ದಾರೆ.


    ಉತ್ತರ ಕನ್ನಡ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ, ಪ್ರವಾಸೋದ್ಯಮ, ಕಡಲ ಅಭಿವೃದ್ಧಿ, ಬೃಹತ್ ಸರಕು ಸಾಗಣೆ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗಾಗಿ 4 ಬೃಹತ್ ಯೋಜನೆಗಳ ಕುರಿತಂತೆ ಸಮಗ್ರ ಕಾರ್ಯಸಾಧ್ಯತಾ ವರದಿಗಳನ್ನು (ಡಿಎಫ್‍ಆರ್) ಸಾಗರಮಾಲಾ ಸೆಲ್ ಮತ್ತು ಸಾಗರಮಾಲಾ ಅಭಿವೃದ್ಧಿ ಕಂಪನಿ ಲಿಮಿಟೆಡ್ (ಎಸ್‍ಡಿಸಿಎಲ್)ಗೆ ಸಲ್ಲಿಸಲಾಗಿದೆ. ಇನ್ನೂ ಎರಡು ಅಭಿವೃದ್ಧಿ ಯೋಜನೆಗಳಿಗಾಗಿ ಸಮಗ್ರ ವರದಿಯನ್ನು ಶೀಘ್ರದಲ್ಲೇ ಸಲ್ಲಿಸಲಾಗುವುದು. ಈ ಯೋಜನೆಗಳು ಕಾರವಾರ ಬಂದರುಗಳಲ್ಲಿ ಅಗತ್ಯ ಸಲಕರಣೆಗಳನ್ನು ಸ್ಥಾಪಿಸುವುದು, ಕಾರವಾರ ಬಂದರಿನ ಯಾಂತ್ರೀಕರಣ, ಸೀಪ್ಲೇನ್ ಸೌಲಭ್ಯಗಳು ಮತ್ತು ಜಲಮಾರ್ಗ ಅಭಿವೃದ್ಧಿಯಂತಹ ಘಟಕಗಳಿಗೆ ಮಾತ್ರ ಸೀಮಿತವಾಗಿರದೇ, ಆರ್ಥಿಕ ನೆರವಿನ ಕುರಿತ ಒಪ್ಪಂದಗಳನ್ನು ಒಳಗೊಂಡಿರುವಂತಹ ಪ್ರಸ್ತಾವನೆಗಳನ್ನು ಸಾಗರಮಾಲಾ ಸೆಲ್‍ಗೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

    300x250 AD

    ಬಂದರುಗಳು, ಹಡಗು ಮತ್ತು ಜಲಮಾರ್ಗಗಳು ಸ್ಥಳೀಯ ಜನಸಂಖ್ಯೆ ಹಾಗೂ ಸರಿಸುಮಾರು 30 ಲಕ್ಷ ಪ್ರವಾಸಿಗರನ್ನು ಸಂಪರ್ಕಿಸುವ ಜೊತೆಗೆ ಸಾರಿಗೆ ಮತ್ತು ಬೃಹತ್ ಸರಕು ಸಾಗಾಣಿಕೆ ಅಗತ್ಯತೆಗಳನ್ನು ಪೂರೈಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.ಇದಲ್ಲದೆ, ಅಭಿವೃದ್ಧಿಪಡಿಸಿದ ಸೌಲಭ್ಯಗಳು ಪಶ್ಚಿಮ ಕರಾವಳಿಯಲ್ಲಿ ಕಡಲ ಕಾರ್ಯಾಚರಣೆಗಳಿಗೆ ಪ್ರಮುಖ ಮುಖ್ಯಭೂಮಿಕೆಯಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಆ ಮೂಲಕ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಎಂದು ಸಂಸದ ಹೆಗಡೆ ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ಸಂಸದರ ಆಪ್ತ ಕಾರ್ಯದರ್ಶಿ ಸುರೇಶ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top