• Slide
    Slide
    Slide
    previous arrow
    next arrow
  • ಶಾಹಿನ್ ಚಂಡಮಾರುತ; ಜಿಲ್ಲೆಯಲ್ಲಿ ಅ.7ರವರೆಗೂ ಯೆಲ್ಲೋ ಅಲರ್ಟ್

    300x250 AD

    ಕಾರವಾರ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ, ಶಾಹಿನ್ ಚಂಡ ಮಾರುತದ ಪರಿಣಾಮ ಅ.7ರ ತನಕ ರಾಜ್ಯದ ಹಲವೆಡೆ ಮಳೆ ಮುಮದುವರೆಯಲಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಪ್ರಕಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    300x250 AD


    ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕು ದಿನ ಮುಂದುವರೆಯಲಿದ್ದು, ಉತ್ತರ ಕನ್ನಡ ಸೇರಿ ಉಡುಪಿ, ದಕ್ಷಿಣ ಕನ್ನಡ ದಲ್ಲಿ ಇಂದಿನಿಂದ ಅಕ್ಟೋಬರ್ 7 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸೆದೆ. ಇನ್ನುಳಿದಂತೆ ಹಾಸನ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ಶಿವಮೊಗ್ಗ, ಮಂಡ್ಯ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತ ಪರಿಚಲನೆಯು ಸಮುದ್ರ ಮಟ್ಟಕ್ಕಿಂತ 4.5 ಕಿ.ಮೀ ವರೆಗೂ ವಿಸ್ತರಿಸಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top