• Slide
    Slide
    Slide
    previous arrow
    next arrow
  • ಮುಂಡಗೋಡದಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣ; ಮುನ್ನೆಚ್ಚರಿಕೆ ಕ್ರಮ ಬಗ್ಗೆ ಸಿಪಿಐ ಜೊತೆ ಸಭೆ

    300x250 AD

    ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಸಿಪಿಐ ಎಸ್.ಎಸ್. ಸಿಮಾನಿ ಅವರ ನೇತೃತ್ವದಲ್ಲಿ ತಾಲೂಕಿನ ಸಹಕಾರಿ ಸಂಘದ ವ್ಯವಸ್ಥಾಪಕರು ಹಾಗೂ ಸೊಸೈಟಿಯ ಕೆಲ ಅಧ್ಯಕ್ಷರ ಜೊತೆ ಸಭೆ ನಡೆಸಿ ಮುನ್ನೆಚ್ಚರಿಕೆಯಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆÉಯಲ್ಲಿ ತಿಳಿಸಿದರು.

    300x250 AD


    ಪೋಲಿಸ್ ಠಾಣೆಯಲ್ಲಿ ನಡೆದ ಸಭೆಯಲ್ಲಿ ಸಿಪಿಐ ಎಸ್.ಎಸ್. ಸಿಮಾನಿ ಮಾತನಾಡಿ, ತಾಲೂಕಿನ ಕೆಲವು ಕಡೆ ಅದರಲ್ಲ್ಲಿಯೂ ಸಂಘ-ಸಂಸ್ಥೆ, ಬ್ಯಾಂಕ್‍ಗಳಲ್ಲಿ ಕಳ್ಳರು ಕಳ್ಳತನ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಮುನ್ನೆಚ್ಚರಿಕೆಯಾಗಿ ತಮ್ಮ ಸೊಸೈಟಿ ಹಾಗೂ ಬ್ಯಾಂಕ್‍ಗಳಲ್ಲಿ ಕಡ್ಡಾಯವಾಗಿ ಸಿ.ಸಿ ಕ್ಯಾಮೆರಾಗಳನ್ನು ಹಾಗೂ ರಾತ್ರಿ ವೇಳೆಯಲ್ಲಿ ವಾಚಮ್ಯಾನ್‍ರನ್ನು ನೇಮಿಸಿಕೊಳ್ಳಬೇಕೆಂದು ಸೂಚಿಸಿದರು. ಇದಕ್ಕೆ ಸಹಕಾರಿ ಸಂಘದ ವ್ಯವಸ್ಥಾಪಕರು ಹಾಗೂ ಅಧ್ಯಕ್ಷರುಗಳು ಸಮ್ಮತಿಸಿ ಇಲಾಖೆಗೆ ಸಹಕಾರ ನೀಡುವುದಾಗಿ ತಿಳಿಸಿದರು.
    ಬಸವರಾಜ ಮಬನೂರ ಹಾಗೂ ತಾಲೂಕಿನ ಸಹಕಾರಿ ಸಂಘದ ವ್ಯವಸ್ಥಾಪಕರು ಹಾಗೂ ಸೊಸೈಟಿಯ ಅಧ್ಯಕ್ಷರುಗಳು ಮತ್ತು ಪೊಲೀಸ ಸಿಬ್ಬಂದಿಗಳು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top