ಮುಂಡಗೋಡ: ಬೈಕ್ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 24 ಗಂಟೆ ಒಳಗಡೆ ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ.
ತಾಲೂಕಿನ ಲಕ್ಕೊಳ್ಳಿ ಗ್ರಾಮದ ಸಾಜು ವರ್ಗಿಸ್ ಎಂಬುವವರ ಬೈಕ್ ಕಳ್ಳತನವಾಗಿದ್ದರ ಬಗ್ಗೆ ಮುಂಡಗೋಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಕೈಗೆತ್ತಿಕೊಂಡ ಪೋಲಿಸರು ಕೇವಲ 24 ಗಂಟೆ ಒಳಗಡೆ ಕಳ್ಳನನ್ನು ಬಂಧಿಸಿದ್ದಾರೆ.
ಮುಂಡಗೋಡ ಪಟ್ಟಣದ ಹೊಸ ಓಣಿಯ ಮಹಮ್ಮದ್ ಜಾಫರ್ ಮಹಮ್ಮದ್ ಉಸ್ಮಾನ್ ಲೋಹಾರ ಆರೋಪಿಯೆಂದು ಹೇಳಲಾಗಿದೆ.
ಡಿವೈಎಸ್ಪಿ ರವಿ ನಾಯ್ಕ ಅವರ ಮಾರ್ಗದರ್ಶನದಲ್ಲಿ ಸಿಪಿಐ ಸಿದ್ದಪ್ಪ ಸಿಮಾನಿ,ಪಿಎಸ್ಐ ಬಸವರಾಜ ಮಬನೂರ, ಎನ್.ಡಿ.ಜಕ್ಕಣ್ಣನವರ್, ಸಿಬ್ಬಂದಿಗಳಾದ ಗಣಪತಿ ಹುನ್ನಳ್ಳಿ, ಧರ್ಮರಾಜ ನಾಯ್ಕ, ಜಿ.ಬಿ.ವಿನೋದಕುಮಾರ, ಅರುಣ ಬಾಗೇವಾಡಿ, ಶರತ್ ದೇವಳ್ಳಿ, ತಿರುಪತಿ ಚೌಡಣ್ಣವರ್, ಪ್ರಕಾಶ ಶೃಂಗೇರಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.