ಮೈಸೂರು: ನಗರದ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಾಡ ಹಬ್ಬ ದಸರಾಗೆ ವಿದ್ಯುಕ್ತ ಚಾಲನೆ ದೊರೆತಿದೆ. ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಈ ಬಾರಿಯ ದಸರಾಗೆ ಚಾಲನೆ ನೀಡಿದ್ದಾರೆ. ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿ, ದೀಪ ಬೆಳಗಿ ನಾಡಹಬ್ಬವನ್ನು ಉದ್ಘಾಟನೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೈಸೂರು ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್, ಸಚಿವರಾದ ಸುನೀಲ್ ಕುಮಾರ್, ಆರ್. ಅಶೋಕ್, ಡಾ. ಕೆ. ಸುಧಾಕರ್ ಸೇರಿದಂತೆ ಇನ್ನೂ ಹಲವು ಗಣ್ಯರು ಉಪಸ್ಥಿತರಿದ್ದರು.
ಇಂದಿನಿಂದ ದಸರಾ ಪ್ರಯುಕ್ತ ಮೈಸೂರಿನಲ್ಲಿ ಹಲವು ಕಾರ್ಯಕ್ರಮಗಳು ನಡೆಯಲಿದ್ದು, ಈಗಲೂ ರಾಜ್ಯ ಸರ್ಕಾರ ಹೊರಡಿಸಿರುವ ಕೊರೋನಾ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡು ಈ ಕಾರ್ಯಕ್ರಮಗಳು ನಡೆಯಲಿವೆ. ಅ. 15 ಕ್ಕೆ ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ನಡೆಯಲಿದೆ.