• Slide
    Slide
    Slide
    previous arrow
    next arrow
  • ಲಯನ್ಸ್ ಸ್ಕೌಟ್ಸ್- ಗೈಡ್ಸ್ ವಿದ್ಯಾರ್ಥಿಗಳಿಂದ ಬೀದಿ ನಾಟಕ ಪ್ರದರ್ಶನ

    300x250 AD

    ಶಿರಸಿ: ಭಾರತ ಸ್ಕೌಟ್ಸ್ & ಗೈಡ್ಸ್ ಕರ್ನಾಟಕ ಇವರ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆಯ ಅಂಗವಾಗಿನ ಸಾಪ್ತಾಹಿಕ ಕಾರ್ಯಕ್ರಮದಲ್ಲಿ ಅ.7 ಗುರುವಾರ ಲಯನ್ಸ್ ಸ್ಕೌಟ್ಸ್ & ಗೈಡ್ಸ್ ವಿದ್ಯಾರ್ಥಿಗಳು ಬಾಲ್ಯ ವಿವಾಹ ಮತ್ತು ಜಲಸಂರಕ್ಷಣೆ ಬೀದಿ ನಾಟಕಗಳನ್ನು ಪ್ರದರ್ಶಿಸಿದರು.


    ಸಾರ್ವಜನಿಕರಿಗೆ ಹಾಗೂ ಮಕ್ಕಳಿಗೆ ಬಾಲ್ಯ ವಿವಾಹ ನಿಷೇಧಿಸುವುದರ ಹಾಗೂ ಜಲ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವುದೇ ಈ ನಾಟಕದ ಪ್ರಮುಖ ಉದ್ದೇಶವಾಗಿತ್ತು.

    300x250 AD

    ಶಾಲೆಯ ಮುಖ್ಯಾಧ್ಯಾಪಕ ಶಶಾಂಕ ಹೆಗಡೆಯವರ ಉಪಸ್ಥಿತಿಯಲ್ಲಿ, ಗೈಡ್ಸ್ ಕ್ಯಾಪ್ಟನ್ ಚೇತನಾ ಪಾವಸ್ಕರ್ ಹಾಗೂ ಸ್ಕೌಟ್ಸ್ ಮಾಸ್ಟರ್ ರಾಘವೇಂದ್ರ ಹೊಸೂರು ಇವರ ಮಾರ್ಗದರ್ಶನದಲ್ಲಿ ಈ ನಾಟಕವನ್ನು ವಿದ್ಯಾರ್ಥಿಗಳು ಅರ್ಥಬದ್ಧವಾಗಿ ಪ್ರದರ್ಶಿಸಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top