ಯಲ್ಲಾಪುರ: ನಗರದ ಕೋಟೆ ಕರಿಯವ್ವ ದೇವಸ್ಥಾನದಲ್ಲಿ ನವರಾತ್ರಿ ಮೂರನೇ ದಿನದ ಉತ್ಸವದ ಪ್ರಯುಕ್ತ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ಗಮನ ಸೆಳೆಯಿತು.
ಚಂದ್ರಘಂಟಾ: `ಚಂದ್ರಃ ಘಂಟಾಯಾಂ ಯಸ್ಯಾ ಸಾ ಚಂದ್ರಘಂಟಾ| ಆಹ್ಲಾದಯತಿ ಇತಿ ಚಂದ್ರಃ|’ ಅಂದರೆ ಆಹ್ಲಾದಕಾರಕ ಚಂದ್ರನು ಯಾರ ದ್ವಾರದಲ್ಲಿ ಸ್ಥಿರವಾಗಿದ್ದಾನೆಯೋ ಅವಳೇ ಚಂದ್ರಘಂಟಾ. ಆಹ್ಲಾದವೆಂದರೆ ಮಮತೆ, ಕ್ಷಮಾಶೀಲತೆ ಮತ್ತು ವಾತ್ಸಲ್ಯ ಈ ಮೂರೂ ಗುಣಗಳ ಸಮ್ಮಿಲಿತ ಸ್ಥಿತಿ.